
15-4-2025
ಪ್ರಕಟಣೆಯ ಕೃಪೆಗಾಗಿ
ಡಾ. ಅಂಬೇಡ್ಕರ್ರಿಂದ ನಿರಂತರ ಅನ್ಯಾಯ ಮಾಡಿದ ಕಾಂಗ್ರೆಸ್- ಗೋವಿಂದ ಕಾರಜೋಳ
ನಿಪ್ಪಾಣಿ: ಡಾ. ಅಂಬೇಡ್ಕರ್ ಅವರು ಎರಡು ಬಾರಿ ಲೋಕಸಭಾ ಚುನಾವಣೆಯಲ್ಲಿ ಸೋಲಲು ಕಾಂಗ್ರೆಸ್ ಪಕ್ಷ ಕಾರಣವಾಗಿತ್ತು ಎಂದು ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಅವರು ಟೀಕಿಸಿದರು.
ಇಲ್ಲಿ ಇಂದು ಏರ್ಪಡಿಸಿದ್ದ ‘ಭೀಮ ಹೆಜ್ಜೆ’ ಶತಮಾನದ ಸಂಭ್ರಮ ಕಾರ್ಯಕ್ರಮದ ಐತಿಹಾಸಿಕ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಜೀವಿತ ಕಾಲದಲ್ಲಿ ಡಾ. ಅಂಬೇಡ್ಕರ್ ಅವರಿಗೆ ಭಾರತ ರತ್ನ ನೀಡಲಿಲ್ಲ. ಗೌರವವನ್ನೂ ಕೊಡಲಿಲ್ಲ. ಮಲ್ಲಿಕಾರ್ಜುನ ಖರ್ಗೆಯವರಿಗೂ ಕವಡೆ ಕಿಮ್ಮತ್ತನ್ನೂ ಕಾಂಗ್ರೆಸ್ಸಿನವರು ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು.
ಬಾಬು ಜಗಜೀವನರಾಂ ಅವರಿಗೂ ಕೂಡ ಕುತಂತ್ರದಿಂದ ಸೋಲಿಸಲು ಕಾಂಗ್ರೆಸ್ ಮುಂದಾಗಿತ್ತು. ಪ್ರಧಾನಿ ಮೋದಿಜೀ ಅವರು, ಅಂಬೇಡ್ಕರರ ಸಂವಿಧಾನ ಇರುವ ಕಾರಣ ತಮ್ಮಂಥ ಸಾಮಾನ್ಯ ಮನುಷ್ಯ ಕೂಡ ಪ್ರಧಾನಿ ಆಗಲು ಸಾಧ್ಯವಾಯಿತೆಂದು ತಿಳಿಸಿದ್ದರು ಎಂದು ನೆನಪಿಸಿದರು. ಕಾಂಗ್ರೆಸ್ಸಿಗರು, ಕಾಂಗ್ರೆಸ್ಸಿನ ಮುಖಂಡರು ಹೀಗೆ ಹೇಳಿದ್ದಾರಾ ಎಂದು ಪ್ರಶ್ನಿಸಿದರು.
ಇಂದಿರಾ ಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿಯವರು ದಲಿತರಿಗೆ ಗೌರವ ಕೊಡುತ್ತಿಲ್ಲ ಎಂದು ಆಕ್ಷೇಪಿಸಿದರು. ಸಿದ್ದರಾಮಯ್ಯನವರ ಸರಕಾರವು ದಲಿತರ ಅಭ್ಯುದಯಕ್ಕೆ ಇರುವ 38 ಸಾವಿರ ಕೋಟಿಗೂ ಹೆಚ್ಚು ಹಣವನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ದೂರಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಮುತುವರ್ಜಿಯಿಂದ ಈ ಕಾರ್ಯಕ್ರಮ ಸಾಧ್ಯವಾಗಿದೆ ಎಂದು ವಿವರಿಸಿದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please लॉगिन