ಪತ್ರಿಕಾ ಆಹ್ವಾನ 10-4-2025


10-04-2025
Press Release

10-4-2025

 

ಪತ್ರಿಕಾ ಆಹ್ವಾನ

 

ಯಲ್ಲಾಪುರ (ಉತ್ತರಕನ್ನಡ) : ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ 11.4.2025ರ ಶುಕ್ರವಾರ ಬೆಳಿಗ್ಗೆ 10.30 ಗಂಟೆಗೆ ಯಲ್ಲಾಪುರದ ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ವೈ.ಟಿ.ಎಸ್.ಎಸ್ ಕಾಲೇಜು ಮೈದಾನ ವನ್ನು ತಲುಪಿ ಪ್ರತಿಭಟನಾ ಸಭೆ ನಡೆಯಲಿದೆ.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ವಿ. ಸದಾನಂದ ಗೌಡ, ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಂ ಗೌಡ, ರಾಜ್ಯ ಉಪಾಧ್ಯಕ್ಷರು ಮತ್ತು ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ನಾಯಕ್, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಶಾಸಕರಾದ ಶ್ರೀ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಶ್ರೀ ಗಣಪತಿ ಉಳ್ವೇಕರ್, ಮಾಜಿ ಶಾಸಕರಾದ ಶ್ರೀ ಸುನೀಲ್ ನಾಯ್ಕ್, ಶ್ರೀ ಸುನೀಲ್ ಹೆಗಡೆ, ಉತ್ತರಕನ್ನಡ ಜಿಲ್ಲಾಧ್ಯಕ್ಷರಾದ ಶ್ರೀ ಎನ್.ಎಸ್. ಹೆಗಡೆ ಮತ್ತು ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.                         

 

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login