ಪತ್ರಿಕಾ ಆಹ್ವಾನ 10-4-2025


10-04-2025
Press Release

10-4-2025

 

ಪತ್ರಿಕಾ ಆಹ್ವಾನ

 

ಬೆಂಗಳೂರು: ಭೀಮ ಹೆಜ್ಜೆ 100ರ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ 11.4.2025ರ ಬೆಳಿಗ್ಗೆ 10.30 ಗಂಟೆಗೆ ಬಿ.ಐ.ಇ.ಸಿ. ಮೈದಾನದಿಂದ ಬೈಕ್ ರ್ಯಾಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಕೇಂದ್ರ ಸಚಿವರಾದ ಶ್ರೀ ಎ. ನಾರಾಯಣಸ್ವಾಮಿ, ಸಂಸದರಾದ ಶ್ರೀ ಪಿ.ಸಿ. ಮೋಹನ್, ರಾಜ್ಯ ಉಪಾಧ್ಯಕ್ಷರಾದ ಶ್ರೀ ಎನ್. ಮಹೇಶ್, ಶಾಸಕರಾದ ಶ್ರೀ ಎಸ್. ರಘು, ಮಾಜಿ ಸಂಸದರಾದ ಶ್ರೀ ಎಸ್. ಮುನಿಸ್ವಾಮಿ, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷರು ಮತ್ತು ಶಾಸಕರಾದ ಶ್ರೀ ಸಿಮೆಂಟ್ ಮಂಜುನಾಥ್, ಬೆಂಗಳೂರಿನ ಶಾಸಕರುಗಳು, ವಿಧಾನಪರಿಷತ್ ಸದಸ್ಯರು , ಜಿಲ್ಲಾಧ್ಯಕ್ಷರುಗಳು, ಭೀಮ ಹೆಜ್ಜೆ ರಾಜ್ಯ ಸಂಚಾಲಕರು ಮತ್ತು ಬಿಜೆಪಿ ಎಸ್‍ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಂದ್ರ ಕೌತಾಳ, ಭೀಮ ಹೆಜ್ಜೆ ರಾಜ್ಯ ಸಹ-ಸಂಚಾಲಕರು ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಶ್ರೀ ಜಿ. ಪ್ರಶಾಂತ್ ಮತ್ತು ಪಕ್ಷದ ಮುಖಂಡರುಗಳು ಉಪಸ್ಥಿತರಿರಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.        

    

 

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login