
17-4-2025
ಪತ್ರಿಕಾ ಆಹ್ವಾನ
ಕಲಬುರ್ಗಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ 18.4.2025 ಶುಕ್ರವಾರ ಬೆಳಿಗ್ಗೆ 9.00 ಗಂಟೆಗೆ “ಜಗತ್ ಸರ್ಕಲ್ ನಿಂದ ಡಿ.ಸಿ. ಕಚೇರಿ ಮುಂಭಾಗದವರೆಗೆ ಪ್ರತಿಭಟನಾ ಮೆರವಣಿಗೆ" ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಶಾಸಕರಾದ ಡಾ. ಅವಿನಾಶ್ ಜಾಧವ್, ಶ್ರೀ ಬಸವರಾಜ ಮತ್ತಿಮೂಡ್, ಮಾಜಿ ಸಂಸದರಾದ ಡಾ. ಉಮೇಶ್ ಜಾಧವ್, ವಿಧಾನಪರಿಷತ್ ಸದಸ್ಯರಾದ ಶ್ರೀ ಬಿ.ಜಿ. ಪಾಟೀಲ್, ಶ್ರೀ ಸುನೀಲ್ ವಲ್ಯಾಪುರೆ, ಮಾಜಿ ಶಾಸಕರಾದ ಶ್ರೀ ರಾಜಕುಮಾರ್ ಪಾಟೀಲ್ ತೇಲ್ಕೂರ್, ಶ್ರೀ ಸುಭಾಷ್ ಗುತ್ತೇದಾರ್, ಶ್ರೀ ದತ್ತಾತ್ರೇಯ ಪಾಟೀಲ್ ರೇವೂರ, ವಿಧಾನಪರಿಷತ್ ಮಾಜಿ ಸದಸ್ಯರಾದ ಶ್ರೀ ಅಮರನಾಥ್ ಪಾಟೀಲ್, ಶ್ರೀ ಶಶಿಲ್ ಜಿ. ನಮೋಶಿ, ಮುಖಂಡರಾದ ಶ್ರೀ ನಿತಿನ್ ಗುತ್ತೇದಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ಕಲಬುರ್ಗಿ ನಗರ ಜಿಲ್ಲಾಧ್ಯಕ್ಷರಾದ ಶ್ರೀ ಚಂದ್ರಕಾಂತ್ ಬಿ. ಪಾಟೀಲ್, ಕಲಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಅಶೋಕ್ ಬಗಲಿ, ಕಲಬುರ್ಗಿ ಗ್ರಾಮಾಂತರ ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ಶಿವರಾಜ್ ಪಾಟೀಲ್ ರದ್ದೇವಾಡಿ, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರುಗಳು ಮತ್ತು ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login