
21-4-2025
ಪತ್ರಿಕಾ ಆಹ್ವಾನ
ಕೊಪ್ಪಳ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ 22.4.2025 ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಅಶೋಕ್ ಸರ್ಕಲ್ ನಿಂದ ಬಸವೇಶ್ವರ ಸರ್ಕಲ್ ತನಕ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಸಂಸದರಾದ ಶ್ರೀ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಮಾಜಿ ಸಚಿವರು ಮತ್ತು ಶಾಸಕರಾದ ಶ್ರೀ ಜಿ. ಜನಾರ್ಧನ ರೆಡ್ಡಿ, ವಿಧಾನಸಭೆಯ ಮುಖ್ಯ ಸಚೇತಕರಾದ ಶ್ರೀ ದೊಡ್ಡನಗೌಡ ಹೆಚ್. ಪಾಟೀಲ್, ಮಾಜಿ ಸಚಿವರಾದ ಶ್ರೀ ಹಾಲಪ್ಪ ಆಚಾರ್, ವಿಧಾನಪರಿಷತ್ ಸದಸ್ಯರಾದ ಶ್ರೀ ಸಿ.ಟಿ. ರವಿ, ಶ್ರೀಮತಿ ಹೇಮಲತಾ ನಾಯಕ್, ಮಾಜಿ ಶಾಸಕರಾದ ಶ್ರೀ ಪರಣ್ಣ ಮುನವಳ್ಳಿ, ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಶರಣು ತಳ್ಳಿಕೇರಿ, ಜಿಲ್ಲಾಧ್ಯಕ್ಷರಾದ ಶ್ರೀ ಬಸವರಾಜ್ ದಡೆಸಗೂರು, ನಿಕಟಪೂರ್ವ ಜಿಲ್ಲಾಧ್ಯಕ್ಷರಾದ ಶ್ರೀ ನವೀನ್ ಗುಳಗಣ್ಣನವರ್, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರುಗಳು ಮತ್ತು ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಲು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login