
22.4.2025
ಪತ್ರಿಕಾ ಆಹ್ವಾನ
ರಾಯಚೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ ‘ಜನಾಕ್ರೋಶ ಯಾತ್ರೆ’ ಸಂಬಂಧ 23.4.2025 ಬುಧವಾರ ಸಂಜೆ 5.00 ಗಂಟೆಗೆ “ನಗರದ ಚಂದ್ರಮೌಳೇಶ್ವರ ವೃತ್ತದಿಂದ ಆರಂಭವಾಗಿ ಹಳೆ DC ಆಫೀಸ್ ಎದುರುಗಡೆ ಇರುವ ಉದ್ಯಾನವನ (ಟಿಪ್ಪು ಸುಲ್ತಾನ್ ಗಾರ್ಡನ್)” ತನಕ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರು ಹಾಗೂ ಶಾಸಕರಾದ ಶ್ರೀ ಗಾಲಿ ಜನಾರ್ದನ ರೆಡ್ಡಿ ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್, ಶಾಸಕರಾದ ಡಾ. ಶಿವರಾಜ್ ಪಾಟೀಲ್, ಶ್ರೀ ಮಾನಪ್ಪ ಡಿ. ವಜ್ಜಲ್, ರಾಯಚೂರು ಜಿಲ್ಲಾಧ್ಯಕ್ಷರಾದ ಶ್ರೀ ವೀರನಗೌಡ ಲೆಕ್ಕಿಹಾಳ, ಮಾಜಿ ಸಚಿವರು, ಮಾಜಿ ಶಾಸಕರು, ಮಾಜಿ ಸಂಸದರು, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರುಗಳು ಮತ್ತು ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಸಂದರ್ಭದಲ್ಲಿ ಭಾಗವಹಿಸಿ ಸೂಕ್ತ ಪ್ರಚಾರ ನೀಡಬೇಕೆಂದು ಕೋರಲಾಗಿದೆ.
(ಕರುಣಾಕರ ಖಾಸಲೆ)
ರಾಜ್ಯ ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login