ಪತ್ರಿಕಾ  ಆಹ್ವಾನ 8-4-2025


08-04-2025
Press Release

8-4-2025

 

ಪತ್ರಿಕಾ  ಆಹ್ವಾನ

 

ಮಡಿಕೇರಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆಸುತ್ತಿರುವ 'ಜನಾಕ್ರೋಶ ಯಾತ್ರೆ' ಸಂಬಂಧ ನಾಳೆ 9-4-2025 ರಂದು ಬೆಳಿಗ್ಗೆ 11.00 ಗಂಟೆಗೆ ಜನಾಕ್ರೋಶ ಯಾತ್ರೆಯು ಮಡಿಕೇರಿಯ ಚೌಡೇಶ್ವರಿ ದೇವಸ್ಥಾನದಿಂದ ಪ್ರಾರಂಭಗೊಳ್ಳಲಿದೆ. ನಂತರ ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಬಹಿರಂಗ ಪ್ರತಿಭಟನಾ ಸಮಾವೇಶ ನಡೆಯಲಿದೆ.

ಈ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ ವಿ ಸದಾನಂದಗೌಡ , ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್ , ವಿರೋಧ ಪಕ್ಷದ ವಿಧಾನ ಪರಿಷತ್ತಿನ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ , ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಶ್ರೀ ಎನ್. ರವಿಕುಮಾರ್ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸಿ.ಟಿ ರವಿ , ಮಾಜಿ ಸಚಿವರಾದ ಶ್ರೀ ಬಿ. ಶ್ರೀರಾಮುಲು , ಸಂಸದರಾದ ಶ್ರೀ ಯದುವೀರ್ ಕೃಷ್ಣರಾಜದತ್ತ ಒಡೆಯರ್ , ಮಾಜಿ ಸಭಾಧ್ಯಕ್ಷರಾದ ಶ್ರೀ ಕೆ.ಜಿ ಬೋಪಯ್ಯ , ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸುಜಾ ಕುಶಾಲಪ್ಪ , ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಶ್ರೀ ಸುನೀಲ್ ಸುಬ್ರಮಣಿ , ಶ್ರೀ ಎಸ್.ಜಿ ಮೇದಪ್ಪ , ಶಾಸಕರಾದ ಶ್ರೀ ಟಿ ಎಸ್ ಶ್ರೀವತ್ಸ , ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಪ್ರೀತಮ್ ಗೌಡ , ಮಾಜಿ ಸಂಸದರಾದ ಶ್ರೀ ಪ್ರತಾಪ್ ಸಿಂಹ , ಕೊಡಗು ಜಿಲ್ಲಾಧ್ಯಕ್ಷರಾದ ಶ್ರೀ ರವಿಕಾಳಪ್ಪ ಹಾಗೂ ಪಕ್ಷದ ಮುಖಂಡರುಗಳು ಪಾಲ್ಗೊಳ್ಳಲಿದ್ದಾರೆ.

ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾಗಿ ವಿನಂತಿ.

               

(ಕರುಣಾಕರ ಖಾಸಲೆ)

ರಾಜ್ಯ ಮಾಧ್ಯಮ ಸಂಚಾಲಕರು

ಬಿಜೆಪಿ ಕರ್ನಾಟಕ

To Write Comment Please Login