
23-4-2025
ಪತ್ರಿಕಾಗೋಷ್ಠಿಗೆ ಆಹ್ವಾನ
ಬೆಂಗಳೂರು: ವಿರೋಧ ಪಕ್ಷದ ನಾಯಕರಾದ ಶ್ರೀ ಆರ್. ಅಶೋಕ್, ಮಾಜಿ ಉಪಮುಖ್ಯಮಂತ್ರಿಗಳು ಮತ್ತು ಶಾಸಕರಾದ ಡಾ. ಸಿ.ಎನ್. ಅಶ್ವತನಾರಾಯಣ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪಿ. ರಾಜೀವ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಜಗದೀಶ್ ಹಿರೇಮನಿ, ರಾಜ್ಯ ವಕ್ತಾರರಾದ ಡಾ. ನರೇಂದ್ರ ರಂಗಪ್ಪ, ಶ್ರೀ ಹೆಚ್.ಎನ್. ಚಂದ್ರಶೇಖರ್ ಅವರು ಇಂದು (23.4.2025) ಬೆಳಿಗ್ಗೆ 11.00 ಗಂಟೆಗೆ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ತಮ್ಮ ಪತ್ರಿಕೆಯ ವರದಿಗಾರರು, ಛಾಯಾಗ್ರಾಹಕರು ಮತ್ತು ಟಿ.ವಿ. ಮಾಧ್ಯಮಗಳ ವರದಿಗಾರರು ಈ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಬೇಕಾಗಿ ವಿನಂತಿ.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login