
23-4-2025
ಪ್ರಕಟಣೆಯ ಕೃಪೆಗಾಗಿ
ಕ್ಯಾಂಡಲ್ ಮಾರ್ಚ್
ಬೆಂಗಳೂರು: ಜಮ್ಮು - ಕಾಶ್ಮೀರದ ಪಹಲ್ಗಾಮ್ ನಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಬಳಿ ಇಂದು ಕ್ಯಾಂಡಲ್ ಮಾರ್ಚ್ ನಡೆಯಿತು. ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಂಸದ ಪಿ.ಸಿ.ಮೋಹನ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕ ವೇದವ್ಯಾಸ ಕಾಮತ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯದ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ವಕ್ತಾರ ಎಸ್.ಪ್ರಕಾಸ್, ಬೆಂಗಳೂರಿನ ಶಾಸಕರು, ವಿಧಾನಪರಿಷತ್ ಸದಸ್ಯರು, ಮಹಿಳಾ ಮೋರ್ಚಾದ ಪ್ರಮುಖರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
To Write Comment Please Login